Home ಮೊಳಕಾಲ್ಮುರು ಮೊಳಕಾಲ್ಮೂರು ಬಳಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ, ಇಬ್ಬರ ದುರ್ಮರಣ
ಮೊಳಕಾಲ್ಮುರು

ಮೊಳಕಾಲ್ಮೂರು ಬಳಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ, ಇಬ್ಬರ ದುರ್ಮರಣ

Share
Share

ಚಿತ್ರದುರ್ಗ/ಮೊಳಕಾಲ್ಮೂರು: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 150 ಎ (NH 150A) ರ ಹಾನಗಲ್ ಪೆಟ್ರೋಲ್ ಬಂಕ್ ಸಮೀಪ ಭಾನುವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿವೆ.

ಮೃತರನ್ನು ಬೆಂಗಳೂರು ದಕ್ಷಿಣ ಮಾಗಡಿ ಪಟ್ಟಣದ ನಿವಾಸಿಗಳಾದ ಶಿವಕುಮಾರ್ (38) ಮತ್ತು ಮಲ್ಲಯ್ಯ (60) ಎಂದು ಗುರುತಿಸಲಾಗಿದೆ. ಇದೇ ಗ್ರಾಮದ ಸುನಿಲ್ ಕುಮಾರ್, ಚೈತ್ರ, ಪವನ್, ಕುಶಾಲ್, ರಮೇಶ್, ಲಕ್ಷ್ಮಮ್ಮ ಹಾಗೂ ಕೆ.ರಮೇಶ್ ಎಂಬುವವರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ದೈವ ದರ್ಶನ ಮುಗಿಸಿ ಮರಳುವಾಗ ದುರಂತ: ಕಳೆದ ಎರಡು ದಿನಗಳ ಹಿಂದೆ ಈ ಕುಟುಂಬ ತಮ್ಮ ಮನೆ ದೇವರಾದ ಮೈಲಾರ ಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿತ್ತು. ಅಲ್ಲಿಂದ ಹೂವಿನ ಹಡಗಲಿ, ಹೊಸಪೇಟೆ, ಬಳ್ಳಾರಿ ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳಿ ದರ್ಶನ ಪಡೆದು, ಮರಳಿ ತಮ್ಮ ಊರಾದ ಮಾಗಡಿಗೆ ಹಿಂದಿರುಗುತ್ತಿದ್ದರು.

ಭಾನುವಾರ ಮುಂಜಾನೆ ಸುಮಾರು 2.30ರ ಸುಮಾರಿಗೆ ಕಾರು ಹಾನಗಲ್ ಸಮೀಪ ಬರುತ್ತಿದ್ದಂತೆ, ಚಾಲಕನ ನಿಯಂತ್ರಣ ತಪ್ಪಿದ ಕಾರು 150 ಎ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಘಟನೆ ಕುರಿತು ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Leave a comment

Leave a Reply

Your email address will not be published. Required fields are marked *

Loading News...

More News

Related Articles

ಮೊಳಕಾಲ್ಮೂರು ಬಿಜೆಪಿಯಲ್ಲಿ ಶುರುವಾಯ್ತು ಟಿಕೆಟ್ ಫೈಟ್: ತಿಪ್ಪೇಸ್ವಾಮಿ ವಿರುದ್ಧ ಬಣ ರಾಜಕೀಯ!

ಮೊಳಕಾಲ್ಮೂರು (Chitradurga Live): ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಯಲ್ಲಿ ಚುನಾವಣೆಗೂ ಮುನ್ನವೇ ಟಿಕೆಟ್ ಫೈಟ್...

ಬರಪೀಡಿತ ಪಟ್ಟಿಯಿಂದ ಮೊಳಕಾಲ್ಮುರು ಕೈಬಿಟ್ಟ ಸರ್ಕಾರ: ಶಾಸಕರು, ಅಧಿಕಾರಿಗಳ ವೈಫಲ್ಯಕ್ಕೆ ಬಿಜೆಪಿ ಆಕ್ರೋಶ

ಮೊಳಕಾಲ್ಮುರು (ಚಿತ್ರದುರ್ಗ): ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿರುವ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಮೊಳಕಾಲ್ಮುರು ತಾಲೂಕನ್ನು ಹೊರಗಿಟ್ಟಿರುವುದು...

ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಪ್ರದೇಶಕ್ಕೆ ಸೇರಿಸಿ: ಶಾಸಕ ಎನ್.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ ವೈರಲ್

ಚಿತ್ರದುರ್ಗ (Chitradurga Live): ಗಡಿಭಾಗದ ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಪ್ರದೇಶಕ್ಕೆ ಸೇರಿಸಬೇಕು ಎಂದು ಕಾಂಗ್ರೆಸ್ ಶಾಸಕ ಎನ್.ವೈ....