ಬೆಂಗಳೂರು, ಆ.21: ಅಪ್ಪರ್ ಭದ್ರಾ ಯೋಜನೆ ಕಾಮಗಾರಿಯನ್ನು ನವೆಂಬರ್ ಅಥವಾ ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ವಿಧಾನಪರಿಷತ್ತಿಗಿಂದು ತಿಳಿಸಿದರು.
ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಈ ಯೋಜನೆಯ ಮೂಲ ಅದಾಜು ರೂ.12,340 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ರೂ.21,473.67 ಕೋಟಿಗಳ ಮೊತ್ತದ ಪುನರ್ ಪರಿಷ್ಕತ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. 2026-27ನೇ ಸಾಲಿನಲ್ಲಿ ರೂ.1042.29 ಕೋಟಿಗಳ ಅನುದಾನ ಹಂಚಿಕೆ ಮಾಡಲಾಗಿದೆ ಎಂದರು.
ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಒಟ್ಠಾರೆ 29.90 ಟಿ.ಎಂ.ಸಿ ನೀರನ್ನು ಬಳಸಿಕೊಂಡು ಚಿತ್ರದುರ್ಗ ಹಾಗೂ ತುಮಮಕೂತು ಶಾಖಾ ಕಾಲುವೆಗಳ ಮೂಲಕ ಚಿಕ್ಕಮಗಳೂತು, ಚಿಯ್ರದುರ್ಗ, ತುಮಖರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ 2,25,515 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಜಾಗೂ 367 ಕೆರೆಗಳನ್ನು ಭರ್ತಿ ಮಾಡುವುದು ಈ ಯೋಜನೆಯ ಉದ್ದೇಶವಾಗಿದ್ದು, ಯೋಜನೆ ಪೂರ್ಣಗೊಂಡರೆ 2,25,515 ಹೆಕ್ಟೇರ್ ಪ್ರದೇಶದ ರೈತರಿಗೆ ಅನುಕೂಲವಾಗುತ್ತದೆ ಎಂದು ಸದನಕ್ಕೆ ಮಾಹಿತಿ ನೀಡಿದರು.
Leave a comment