ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸೈನಿಕರನ್ನು ಗುರಿಯಾಗಿಸಿಕೊಂಡು ಶೀಘ್ರ ಹಣ ಗಳಿಕೆ, ಉದ್ಯೋಗಾವಕಾಶ ಹಾಗೂ ಇ-ಕೆವೈಸಿ ಹೆಸರಿನಲ್ಲಿ ಸೈಬರ್ ವಂಚನೆ ಎಸಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಹಾಗೂ ಮಾಜಿ ಸೈನಿಕರು ಎಚ್ಚರಿಕೆಯಿಂದಿರಬೇಕು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ತಿಳಿಸಿದ್ದಾರೆ.
ಸೈಬರ್ ವಂಚಕರ ಜಾಲ – ಎಚ್ಚರಿಕೆ ವಹಿಸಬೇಕಾದ ಅಂಶಗಳು
ನಕಲಿ ಸಂದೇಶಗಳು ಮತ್ತು ಲಿಂಕ್ಗಳು: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿಗಳು, ಉದ್ಯೋಗದ ಆಮಿಷ ಹಾಗೂ ಹೆಚ್ಚಿನ ಲಾಭದ ಹೂಡಿಕೆ ಸಂದೇಶಗಳ ಬಗ್ಗೆ ಜಾಗ್ರತೆ ವಹಿಸಿ.
ಎ.ಪಿ.ಕೆ (APK) ಫೈಲ್ಗಳು: ಬ್ಯಾಂಕ್ ಖಾತೆ ನವೀಕರಣ ನೆಪದಲ್ಲಿ ಮೊಬೈಲ್ ಮತ್ತು ವಾಟ್ಸಾಪ್ಗಳಿಗೆ ಬರುವ ಅಪರಿಚಿತ APK ಫೈಲ್ಗಳನ್ನು ಯಾವುದೇ ಕಾರಣಕ್ಕೂ ಡೌನ್ಲೋಡ್ ಮಾಡಬೇಡಿ.
ಒ.ಟಿ.ಪಿ ರಹಸ್ಯವಾಗಿರಲಿ: ಅಪರಿಚಿತ ವ್ಯಕ್ತಿಗಳಿಗೆ ಮೊಬೈಲ್ ಒ.ಟಿ.ಪಿ (OTP) ಹಂಚಿಕೊಳ್ಳಬೇಡಿ.
ಡಿಜಿಟಲ್ ಅರೆಸ್ಟ್ ಬೆದರಿಕೆ: ನಕಲಿ ಕರೆಗಳನ್ನು ಮಾಡಿ ಬೆದರಿಕೆ ಹಾಕುವುದು ಹಾಗೂ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಭೀತಿ ಹುಟ್ಟಿಸಿ ಹಣ ದೋಚುವ ಯತ್ನಗಳಿಗೆ ಕಿವಿಗೊಡಬೇಡಿ.
ಸಹಾಯವಾಣಿ ಮಾಹಿತಿ
ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು ಇಂತಹ ಯಾವುದೇ ಆಮಿಷಗಳಿಗೆ ಒಳಗಾಗದೆ ಹೆಚ್ಚಿನ ಜಾಗ್ರತೆ ವಹಿಸಬೇಕು. ಒಂದು ವೇಳೆ ಯಾವುದೇ ರೀತಿಯ ಸೈಬರ್ ವಂಚನೆಗೆ ಒಳಗಾದಲ್ಲಿ ತಕ್ಷಣವೇ 1930 ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೋಂದಾಯಿಸಬೇಕೆಂದು ಇಲಾಖೆಯ ಪ್ರಕಟಣೆಯಲ್ಲಿ ಕೋರಲಾಗಿದೆ.
Leave a comment