Home ಚಳ್ಳಕೆರೆ ಕುಸಿಯುವ ಭೀತಿಯಲ್ಲಿ ವೇದಾವತಿ ನದಿ ಸೇತುವೆ: ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ, ಆತಂಕದಲ್ಲಿ ಜನತೆ
ಚಳ್ಳಕೆರೆ

ಕುಸಿಯುವ ಭೀತಿಯಲ್ಲಿ ವೇದಾವತಿ ನದಿ ಸೇತುವೆ: ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ, ಆತಂಕದಲ್ಲಿ ಜನತೆ

Share
Share

ಚಳ್ಳಕೆರೆ (Chitradurga Live): ತಾಲೂಕಿನ ಕೋನಿಗರಹಳ್ಳಿ ಗ್ರಾಮದ ಬಳಿ ವೇದಾವತಿ ನದಿಗೆ ನಿರ್ಮಿಸಲಾಗಿರುವ ಸೇತುವೆ ದಿಢೀರ್ ಬಿರುಕು ಬಿಟ್ಟಿದ್ದು, ಯಾವ ಕ್ಷಣದಲ್ಲಾದರೂ ಕುಸಿಯುವ ಆತಂಕ ನಿರ್ಮಾಣವಾಗಿದೆ. ಜೀವ ಕೈಯಲ್ಲಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ಜಾಣಕುರುಡು ಪ್ರದರ್ಶಿಸುತ್ತಿದ್ದಾರೆ.

ಚಳ್ಳಕೆರೆಯಿಂದ ಎಲಗಟ್ಟೆ, ಟಿ.ಎನ್. ಕೋಟೆ ಹಾಗೂ ಧರ್ಮಪುರ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಜೀವನಾಡಿ ಈ ಸೇತುವೆ. ಕಳೆದ ಕೆಲವು ವರ್ಷಗಳಿಂದಲೇ ಈ ಸೇತುವೆ ಶಿಥಿಲಾವಸ್ಥೆಗೆ ತಲುಪಿತ್ತು. ಈಗ ಸೇತುವೆಯಲ್ಲಿ ಬಿರುಕುಗಳು ಇನ್ನಷ್ಟು ಹೆಚ್ಚಾಗಿದ್ದು, ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ. ಒಂದು ವೇಳೆ ಸೇತುವೆ ಕುಸಿದರೆ ಈ ಭಾಗದ ಹಳ್ಳಿಗಳ ಸಂಪೂರ್ಣ ರಸ್ತೆ ಸಂಪರ್ಕ ಕಡಿತಗೊಳ್ಳುವುದು ನಿಶ್ಚಿತ.

ಅನಾಹುತಕ್ಕೆ ಕಾಯುತ್ತಿದ್ದಾರಾ ಅಧಿಕಾರಿಗಳು?

ನಿತ್ಯ ಇದೇ ಮಾರ್ಗದಲ್ಲಿ ನೂರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು ಹಾಗೂ ತುರ್ತು ಚಿಕಿತ್ಸೆಗೆ ಆಸ್ಪತ್ರೆಗೆ ತೆರಳುವ ರೋಗಿಗಳು ಸಂಚರಿಸಬೇಕಾದ ಅನಿವಾರ್ಯತೆ ಇದೆ. “ವರ್ಷಗಳಿಂದ ಸೇತುವೆ ಹಾಳಾಗುತ್ತಿದ್ದರೂ ಯಾರೊಬ್ಬರೂ ತಲೆಕೆಡಿಸಿಕೊಂಡಿಲ್ಲ. ಈಗೇನಾದರೂ ಹೆಚ್ಚು ಕಮ್ಮಿಯಾಗಿ ಅನಾಹುತ ಸಂಭವಿಸಿದರೆ ಜೀವಹಾನಿಗೆ ಯಾರು ಹೊಣೆ? ಚುನಾವಣೆ ವೇಳೆ ಮಾತ್ರ ಮತ ಕೇಳಲು ಬರುವ ಜನಪ್ರತಿನಿಧಿಗಳು ಈಗ ಎಲ್ಲಿದ್ದಾರೆ?” ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಅನಾಹುತ ನಡೆದು ಪ್ರಾಣಹಾನಿಯಾದ ಮೇಲೆ ಪರಿಹಾರ ಘೋಷಣೆ ಮಾಡುವ ಬದಲು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಳ್ಳಬೇಕು. ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಸೇತುವೆಯ ಸ್ಥಿತಿಗತಿ ಪರಿಶೀಲಿಸಿ, ತುರ್ತು ದುರಸ್ತಿ ಕಾಮಗಾರಿಗೆ ಮುಂದಾಗಬೇಕು ಎಂದು ಸಾರ್ವಜನಿಕರು ಉಗ್ರವಾಗಿ ಒತ್ತಾಯಿಸಿದ್ದಾರೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Leave a comment

Leave a Reply

Your email address will not be published. Required fields are marked *

Loading News...

More News

Related Articles

ಮದುವೆಯಾದ ಮೂರೇ ದಿನಕ್ಕೆ ಪಾಳುಬಿದ್ದ ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ: ಚಳ್ಳಕೆರೆಯಲ್ಲಿ ದುರಂತ

ಚಿತ್ರದುರ್ಗ (Chitradurga Live): ಮದುವೆಯಾಗಿ ನೂರು ಕಾಲ ಸುಖವಾಗಿ ಬಾಳಬೇಕಾಗಿದ್ದ ನವವಿವಾಹಿತೆಯೊಬ್ಬಳು ಮದುವೆಯಾದ ಮೂರೇ ದಿನಕ್ಕೆ...