ಚಿತ್ರದುರ್ಗ ಲೈವ್ ನ್ಯೂಸ್ (chitradurgalive.com)
ಚಿತ್ರದುರ್ಗ: ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಟಿ. ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ರಮ್ಯಾ ಎಸ್. ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ (Deputy Commissioner) ನೇಮಿಸಲಾಗಿದೆ.
ಟಿ. ವೆಂಕಟೇಶ್ ಸ್ಥಳ ನಿರೀಕ್ಷೆಯಲ್ಲಿ ಇದುವರೆಗೆ ಚಿತ್ರದುರ್ಗದ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಟಿ. ವೆಂಕಟೇಶ್ ಅವರಿಗೆ ಸದ್ಯ ಯಾವುದೇ ನಿರ್ದಿಷ್ಟ ಹುದ್ದೆ ತೋರಿಸದೆ, ಸ್ಥಳ ನಿರೀಕ್ಷೆಯಲ್ಲಿ ಇರಿಸಲಾಗಿದೆ.
ಆಡಳಿತಾತ್ಮಕ ವರ್ಗಾವಣೆ ರಾಜ್ಯದಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಉದ್ದೇಶದಿಂದ ಹಾಗೂ ಸರ್ಕಾರದ ನಿಯಮಾವಳಿಗಳ ಅನ್ವಯ ಈ ವರ್ಗಾವಣೆಗಳನ್ನು ಕೈಗೊಳ್ಳಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ತಿಳಿಸಿದೆ.
ನೂತನ ಡಿಸಿಯಾಗಿ ನೇಮಕಗೊಂಡಿರುವ ರಮ್ಯಾ ಎಸ್. ಅವರು ಈ ಹಿಂದೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಶೀಘ್ರದಲ್ಲೇ ಅವರು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಜಿಲ್ಲೆಯ ಪ್ರಗತಿ, ಸಾರ್ವಜನಿಕ ಸಮಸ್ಯೆಗಳ ಪರಿಹಾರ ಹಾಗೂ ಆಡಳಿತ ಸುಧಾರಣೆಗೆ ಇವರ ನೇಮಕದಿಂದ ಮತ್ತಷ್ಟು ವೇಗ ಸಿಗುವ ನಿರೀಕ್ಷೆಯಿದೆ.
Leave a comment