ಚಿತ್ರದುರ್ಗ (ಆ. 22): ಜಿಲ್ಲೆಯಲ್ಲಿ ಮನೆ-ಮನೆಗೆ ತೆರಳಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸುವ ಕಾರ್ಯದಲ್ಲಿ ಶೇ. 100ರಷ್ಟು ಸಾಧನೆ ಮಾಡಿರುವ ಜಿಲ್ಲಾಡಳಿತದ ಕ್ರಮಕ್ಕೆ ಸರ್ಕಾರದ ಮಟ್ಟದಲ್ಲಿ ತೀವ್ರ ಶ್ಲಾಘನೆ ವ್ಯಕ್ತವಾಗಿದೆ. ಬರೋಬ್ಬರಿ 20 ಲಕ್ಷಕ್ಕೂ ಅಧಿಕ ಪ್ರಮಾಣಪತ್ರಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸಿರುವ ಜಿಲ್ಲಾಡಳಿತದ ಕಾರ್ಯವನ್ನು ಯೋಜನೆ ಮತ್ತು ಕಾರ್ಯಕ್ರಮ ಅನುಷ್ಠಾನ ಇಲಾಖೆಯ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮುನೀಷ್ ಮೌದ್ಗಿಲ್ ಅವರು ಪ್ರಶಂಸಿಸಿದ್ದಾರೆ.
ಈ ಮಹತ್ವದ ಸಾಧನೆಗಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಗೆ ಮುನೀಷ್ ಮೌದ್ಗಿಲ್ ವಿಶೇಷ ಅಭಿನಂದನಾ ಪತ್ರ ಬರೆದಿದ್ದಾರೆ. “ಅಗತ್ಯ ದಾಖಲೆಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸಿರುವುದು ನಿಜವಾದ ಅರ್ಥದಲ್ಲಿ ನಾಗರಿಕ ಕೇಂದ್ರಿತವಾದ ಮಹತ್ವದ ಸಾಧನೆಯಾಗಿದೆ. ಇದು ಸರ್ಕಾರದ ಸೇವೆಗಳನ್ನು ಜನರ ಬಳಿಗೆ ತಲುಪಿಸುವಲ್ಲಿ ಜಿಲ್ಲಾಡಳಿತದ ಬದ್ಧತೆ ಮತ್ತು ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ,” ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಮಹತ್ವದ ಸಾಧನೆಗಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಗೆ ಮುನೀಷ್ ಮೌದ್ಗಿಲ್ ವಿಶೇಷ ಅಭಿನಂದನಾ ಪತ್ರ ಬರೆದಿದ್ದಾರೆ. “ಅಗತ್ಯ ದಾಖಲೆಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸಿರುವುದು ನಿಜವಾದ ಅರ್ಥದಲ್ಲಿ ನಾಗರಿಕ ಕೇಂದ್ರಿತವಾದ ಮಹತ್ವದ ಸಾಧನೆಯಾಗಿದೆ. ಇದು ಸರ್ಕಾರದ ಸೇವೆಗಳನ್ನು ಜನರ ಬಳಿಗೆ ತಲುಪಿಸುವಲ್ಲಿ ಜಿಲ್ಲಾಡಳಿತದ ಬದ್ಧತೆ ಮತ್ತು ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ,” ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ರಾಜ್ಯದ ಇತರ ಎಲ್ಲ ಯೋಜನೆಗಳು ಹಾಗೂ ಉಪಕ್ರಮಗಳ ಅನುಷ್ಠಾನದಲ್ಲಿಯೂ ಇದೇ ರೀತಿಯ ಉತ್ಸಾಹ ಮತ್ತು ಬದ್ಧತೆ ಮುಂದುವರಿಯಲಿ. ಆ ಮೂಲಕ ಜನಪರ ಆಡಳಿತಕ್ಕೆ ಮತ್ತಷ್ಟು ಬಲ ತುಂಬುವಂತಾಗಲಿ ಎಂದು ಮುನೀಷ್ ಮೌದ್ಗಿಲ್ ಅವರು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹಾಗೂ ಈ ಕಾರ್ಯದಲ್ಲಿ ತೊಡಗಿಸಿಕೊಂಡ ಸಂಪೂರ್ಣ ಕಂದಾಯ ಇಲಾಖೆಯ ತಂಡಕ್ಕೆ ಶುಭ ಹಾರೈಸಿದ್ದಾರೆ.
Leave a comment