Home Nidana Varthe ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಪುತ್ರಿ ಪ್ರತಿಭಾ ಮುದ್ದಪ್ಪ ಇನ್ನಿಲ್ಲ; ನಾಳೆ ಅಂತ್ಯಕ್ರಿಯೆ
Nidana Varthe

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಪುತ್ರಿ ಪ್ರತಿಭಾ ಮುದ್ದಪ್ಪ ಇನ್ನಿಲ್ಲ; ನಾಳೆ ಅಂತ್ಯಕ್ರಿಯೆ

Share
Share

ಬೆಂಗಳೂರು, ಆ.27: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುತ್ರಿ ಹಾಗೂ ಮಾಜಿ ಮುಖ್ಯ ಕಾರ್ಯದರ್ಶಿ ದಿವಂಗತ ಎಸ್. ಬಿ. ಮುದ್ದಪ್ಪ ಅವರ ಧರ್ಮಪತ್ನಿ ಪ್ರತಿಭಾ ಮುದ್ದಪ್ಪ (ವಯೋಸಹಜ) ಅವರು ಗುರುವಾರ ಸಂಜೆ ನಿಧನರಾಗಿದ್ದಾರೆ.

ಮೃತರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸಾರ್ವಜನಿಕರು ಅಂತಿಮ ದರ್ಶನ ಪಡೆಯಲು ಅವರ ಪಾರ್ಥಿವ ಶರೀರವನ್ನು ನಾಳೆ ಬೆಳಿಗ್ಗೆ ಆಗಸ್ಟ್ 28, 2026 ರಂದು 11:00 ಗಂಟೆಯವರೆಗೆ ವಿಜಯನಗರದ ಟೆಲಿಫೋನ್ ಎಕ್ಸ್‌ಚೇಂಜ್ ಹತ್ತಿರವಿರುವ ಅವರ ನಿವಾಸದಲ್ಲಿ ಇಡಲಾಗುವುದು.
ಅವರ ಅಂತಿಮ ಸಂಸ್ಕಾರವು ಶುಕ್ರವಾರ ಮಧ್ಯಾಹ್ನ 12:00 ಗಂಟೆಯ ನಂತರ ಮೈಸೂರು ಮುಖ್ಯ ರಸ್ತೆಯ ಗುಡ್ಡದಹಳ್ಳಿಯಲ್ಲಿರುವ ಬಿಬಿಎಂಪಿ (BBMP) ಚಿತಾಗಾರದಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೃತರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Leave a comment

Leave a Reply

Your email address will not be published. Required fields are marked *

Loading News...

More News

Related Articles

ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ, ‘ಜನತಾವಾಣಿ’ ಪತ್ರಿಕೆಯ ಹಿರಿಯ ವರದಿಗಾರ ಸಿದ್ದಯ್ಯ ಒಡೆಯರ್ ನಿಧನ

ದಾವಣಗೆರೆ: 'ಜನತಾವಾಣಿ' ಪತ್ರಿಕೆಯ ವರದಿಗಾರರು ಹಾಗೂ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾಗಿದ್ದ ಹಿರಿಯ ಪತ್ರಕರ್ತ ಶ್ರೀ...

ಜೆ.ಜೆ.ಹಟ್ಟಿ ಜಲಜಾಕ್ಷಮ್ಮ ನಿಧನ: ಸಂಬಂಧಿಕರ ಕಂಬನಿ

ಚಿತ್ರದುರ್ಗ: ನಗರದ ಜೆಜೆ ಹಟ್ಟಿ ನಿವಾಸಿ, ನಿವೃತ್ತ ಶಿಕ್ಷಕಿ ಜಲಜಾಕ್ಷಮ್ಮ (73) ಶುಕ್ರವಾರ ಮಧ್ಯರಾತ್ರಿ ನಿಧನ...